alex Certify ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಗೆ ಮರಳಿದ ಮುದ್ದಹನುಮೇಗೌಡ ತುಮಕೂರಿನಿಂದ ಕಣಕ್ಕೆ ಸಾಧ್ಯತೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ ಅವರ ಸಮ್ಮುಖದಲ್ಲಿ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಅವರು ತುಮಕೂರು ಕ್ಷೇತ್ರದಿಂದ ಅವರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಮುದ್ದಹಮುಮೇಗೌಡ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತದೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲದಿಂದ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಅಭ್ಯರ್ಥಿ ಮಾಡುತ್ತೇವೆ. ತುಮಕೂರು ಜಿಲ್ಲೆಯಲ್ಲಿ ಗೆಲ್ಲಲು ಅವಕಾಶವಿದೆ. ಒಳ್ಳೆಯ ವಾತಾವರಣವಿದೆ. ಸರ್ಕಾರ ಕೂಡ ಜನಪರವಾದ ಕೆಲಸಗಳನ್ನು ಮಾಡಿದೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿ, ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಆದ್ದರಿಂದ ಇಡೀ ರಾಜ್ಯದಲ್ಲಿ ಒಳ್ಳೆಯ ವಾತಾವರಣವಿದೆ ಎಂದು ಹೇಳಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se