alex Certify BREAKING NEWS: ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಗಂಭೀರ

ದಾವಣಗೆರೆ: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಮೆದಿಕೆರೆನಹಳ್ಳಿ ಸಮೀಪ ವಾಹನಕ್ಕೆ ಕಾರ್ ಡಿಕ್ಕಿಯಾಗಿ ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಟ್ಟಿ ದೇವೇಂದ್ರಪ್ಪ ತಲೆಗೆ ಗಂಭೀರ ಗಾಯವಾಗಿದೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನಕ್ಕೆ ಕಾರ್ ಡಿಕ್ಕಿಯಾಗಿದೆ. ದೇವೇಂದ್ರಪ್ಪ ಅವರಿಗೆ ಜಗಳೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಗಳೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ದೇವೇಂದ್ರಪ್ಪ ಕಳೆದ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...