alex Certify BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಕಲ್ಲು ತೂರಾಟ, ಬೆಂಕಿ; ಹಿಂದುತ್ವದ ಬಗ್ಗೆ ಬರೆದಿದ್ದಕ್ಕೆ ಆಕ್ರೋಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರ ನಿವಾಸದ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಲಾಗಿದೆ. ಉತ್ತರಾಖಂಡ್ ನ ನೈನಿತಾಲ್ ನಲ್ಲಿರುವ ಸಲ್ಮಾನ್ ಖುರ್ಷಿದ್ ಅವರ ಮನೆಗೆ ಕಲ್ಲು ತೂರಿದ ನಂತರ ಬೆಂಕಿ ಹಚ್ಚಲಾಗಿದೆ.

ಸಲ್ಮಾನ್ ಖುರ್ಷಿದ್ ಅವರ ‘ಸನ್ ರೈಸ್ ಓವರ್ ಅಯೋಧ್ಯಾ: ನೇಷನ್ ಹುಡ್ ಇನ್ ಅವರ್ ಟೈಮ್ಸ್’ ಎಂಬ ಕೃತಿಯಲ್ಲಿ ಅಯೋಧ್ಯೆ ತೀರ್ಪಿನ ಕುರಿತು ಮತ್ತು ಹಿಂದುತ್ವದ ಬಗ್ಗೆ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ತೀವ್ರ ವಿರೋಧ ಕೇಳಿ ಬಂದಿತ್ತು.

ಹಿಂದುತ್ವವನ್ನು ಭಯೋತ್ಪಾದಕ ಸಂಘಟನೆಗಳಿಗೆ ಹೋಲಿಸಲಾಗಿರುವ ಈ ಕೃತಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಪುಸ್ತಕದ ಮಾರಾಟ ನಿಲ್ಲಿಸಬೇಕೆಂದು ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಕೃತಿಯಲ್ಲಿ ಹಿಂದೂಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ತಮ್ಮ ಮನೆಗೆ ಬೆಂಕಿ ಹಚ್ಚಿದ ಫೋಟೋಗಳನ್ನು ಸಲ್ಮಾನ್ ಖುರ್ಷಿದ್ ಅವರು ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...