alex Certify ದೆಹಲಿಯಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದು: ಸಿಎಂ ಮಾತ್ರ ದೆಹಲಿಗೆ ಪ್ರಯಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆಹಲಿಯಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದು: ಸಿಎಂ ಮಾತ್ರ ದೆಹಲಿಗೆ ಪ್ರಯಾಣ

ಬೆಂಗಳೂರು: ದೆಹಲಿಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವರ ಸಭೆ ರದ್ದಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಬೇಕಿದ್ದ ಸಚಿವರ ಸಭೆ ರದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಬುಧವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಭೇಟಿಯಾಗಲಿದ್ದಾರೆ. ರಾಹುಲ್ ಗಾಂಧಿ ಅಲಭ್ಯತೆ ಹಿನ್ನೆಲೆಯಲ್ಲಿ ಜೂನ್ 21 ರ ಸಚಿವ ಸಂಪುಟ ಸದಸ್ಯರ ದೆಹಲಿಗೆ ಭೇಟಿ ರದ್ದಾಗಿದೆ. ರಾಷ್ಟ್ರಪತಿಗಳ ಭೇಟಿ ನಿಗದಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಹಾಗೂ ಸಂಪುಟ ಸಚಿವರು ದೆಹಲಿಗೆ ತೆರಳಿ ಖರ್ಗೆ, ರಾಹುಲ್ ಗಾಂಧಿ ಜೊತೆ ಸಭೆ ನಡೆಸಬೇಕಿತ್ತು. ರಾಹುಲ್ ಗಾಂಧಿ ಲಭ್ಯವಿಲ್ಲದ ಕಾರಣ ಸಚಿವರ ದೆಹಲಿ ಪ್ರವಾಸ ರದ್ದಾಗಿದೆ. ಸಿಎಂ ಮಾತ್ರ ದೆಹಲಿಗೆ ತೆರಳಿ ರಾಷ್ಟ್ರಪತಿ ಅವರನ್ನು ಭೇಟಿ ಆಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...