alex Certify BREAKING: ಡಿಸಿ ನೋಟಿಸ್ ಮುಟ್ಟಿಲ್ಲ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ: ಡಿ.ಕೆ. ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡಿಸಿ ನೋಟಿಸ್ ಮುಟ್ಟಿಲ್ಲ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ: ಡಿ.ಕೆ. ಸುರೇಶ್

ರಾಮನಗರ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಗದಿಯಾಗಿರುವಂತೆ ಪಾದಯಾತ್ರೆ ಮುಂದುವರಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಕನಕಪುರದಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯಕ್ಕೆ ನೀಡಬೇಕಾದ ಮಾಹಿತಿಯನ್ನು ನಾವು ನೀಡುತ್ತೇವೆ. ಪಾದಯಾತ್ರೆಗೆ ಸರ್ಕಾರ ಜನವರಿ 4ರಂದು ಅನುಮತಿ ನೀಡಿದೆ. ಪಾದಯಾತ್ರೆಯನ್ನು ನಾವು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಸರ್ಕಾರವೇ ಅದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ

ಪಾದಯಾತ್ರೆ ಮಾಡದಂತೆ ಜಿಲ್ಲಾಧಿಕಾರಿ ನೋಟಿಸ್ ಕಳುಹಿಸಿದ್ದರು. ನಾವು ಅದನ್ನು ಮುಟ್ಟಿಲ್ಲ, ಬೇರೆ ಜಿಲ್ಲೆಗಳಿಂದ ಬರುವವರನ್ನು ತಡೆಯುವ ಪ್ರಯತ್ನವಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...