alex Certify 5 ನೇ ದಿನಕ್ಕೆ ಕಾಂಗ್ರೆಸ್ ಧರಣಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ನೇ ದಿನಕ್ಕೆ ಕಾಂಗ್ರೆಸ್ ಧರಣಿ, ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಆಹೋರಾತ್ರಿ ಧರಣಿ 5 ನೇ ದಿನಕ್ಕೆ ಕಾಲಿಟ್ಟಿದೆ.

ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಪಕ್ಷ ಹೋರಾಟ ಕೈಗೊಂಡಿದೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಇಂದು ಕೂಡ ಹೋರಾಟ ಮುಂದುವರೆಸಲಿದೆ. ರಾಜ್ಯಾದ್ಯಂತ ಪ್ರತಿಭಟನೆ ಕೈಗೊಳ್ಳಲಾಗಿದೆ.

ಸಚಿವ ಈಶ್ವರಪ್ಪ ಪದಚ್ಯುತಿಗೆ ಆಗ್ರಹಿಸಿ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಹೋರಾಟ ಕೈಗೊಂಡಿದೆ. ಸದನದಲ್ಲಿಯೂ ಹೋರಾಟ ಮುಂದುವರೆಸಲಿದೆ. ಕಾಂಗ್ರೆಸ್ಗೆ ಪ್ರತಿಭಟನೆಗೆ ಸಮರ್ಥವಾಗಿ ತಿರುಗೇಟು ನೀಡಲು ಬಿಜೆಪಿಯಿಂದ ಇಂದು ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...