alex Certify ಒಬ್ಬರಿಗೆ ಒಂದೇ ಟಿಕೆಟ್: ಡಿಕೆಶಿ ಹೇಳಿಕೆಗೆ ಸಿದ್ಧರಾಮಯ್ಯ ಬೆಂಬಲಿಗರ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಬ್ಬರಿಗೆ ಒಂದೇ ಟಿಕೆಟ್: ಡಿಕೆಶಿ ಹೇಳಿಕೆಗೆ ಸಿದ್ಧರಾಮಯ್ಯ ಬೆಂಬಲಿಗರ ತಿರುಗೇಟು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಒಬ್ಬರಿಗೆ ಒಂದೇ ಟಿಕೆಟ್ ನೀಡಲಾಗುವುದು ಎಂದು ಕೆಪಿಸಿಸಿ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆ ಬಗ್ಗೆ ಸಿದ್ಧರಾಮಯ್ಯ ಬೆಂಬಲಿಗರು ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಒಬ್ಬರಿಗೆ ಒಂದೇ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಎಷ್ಟು ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಟಿಕೆಟ್ ಹಂಚಿಕೆ ಬಗ್ಗೆ ಚುನಾವಣಾ ಸಮಿತಿ ತೀರ್ಮಾನಿಸಿ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುತ್ತದೆ. ಎಐಸಿಸಿ ಅಧ್ಯಕ್ಷರ ನೇತೃತ್ವದ ಸಿಡಬ್ಲ್ಯೂಸಿ ಕೇಂದ್ರ ಚುನಾವಣಾ ಸಮಿತಿಯವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಕೆಪಿಸಿಸಿ ಅಧ್ಯಕ್ಷ ಸತೀಶ್ ಜಾರಕಿಹೊಳಿ ಅವರು, ಸಾಮರ್ಥ್ಯ ಆಧರಿಸಿ ಟಿಕೆಟ್ ಕೊಡಬೇಕಾಗುತ್ತದೆ. ಸಾಮರ್ಥ್ಯ ಹೆಚ್ಚಿದ್ರೆ ಒಂದಕ್ಕಿಂತ ಹೆಚ್ಚು ಟಿಕೆಟ್ ಕೊಡಬೇಕಾಗುತ್ತದೆ ಎಂದು ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...