alex Certify ‘ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ : ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ : ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್

ಬೆಂಗಳೂರು: ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಆಗದ ಕೆಲಸವನ್ನು ಹಿಂದೂಪುರಕ್ಕೆ ಹೋಗಿ ಮಾಡುವುದು ಸಾಧ್ಯವಿಲ್ಲ. ಅವರು ಏನು ತಂತ್ರ ಮಾಡುತ್ತಿದ್ದಾರೆ, ಯಾರು ಏನು ಮಾಡುತ್ತಿದ್ದಾರೆ ಎಲ್ಲವೂ ಗೊತ್ತಿದೆ. ನಮಗೆ ಬಂದಿರುವ ಮಾಹಿತಿ ಪ್ರಕಾರ, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ಅವರೇನೋ ತಂತ್ರ ರೂಪಿಸ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ಹೋಗಿ ಷಡ್ಯಂತ್ರ ಮಾಡ್ತಿದ್ದಾರೆ ಎಂದು ಗುಡುಗಿದರು.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಕಿಡಿ ಕಾರಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದೇ ವೇಳೆ ಶಾಸಕ ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಆರೋಪ ವಿಚಾರವಾಗಿ ಮಾತನಾಡಿದ ಡಿ.ಕೆ. ಶಿವಕುಮಾರ್, ಮುನಿರತ್ನ ಹನಿಟ್ರ್ಯಾಪ್ ಮಾಡಿಸಿದ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...