alex Certify BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ನೀರು ಸರಬರಾಜು ಸಹಾಯಕ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ನೀರು ಸರಬರಾಜು ಸಹಾಯಕ ಸಸ್ಪೆಂಡ್

ಚಿತ್ರದುರ್ಗ :   ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ನೀರು ಸರಬರಾಜು ಸಹಾಯಕನನ್ನು   ಅಮಾನತು ಮಾಡಲಾಗಿದೆ.

ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವನೆ ಹಿನ್ನೆಲೆ 100 ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ.  ಕರ್ತವ್ಯಲೋಪ ಹಿನ್ನೆಲೆ ನೀರು ಸರಬರಾಜು ಸಹಾಯಕ ಸಿ. ಹೆಚ್ ಪ್ರಕಾಶ್ ಬಾಬು  ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ  ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿಯಲ್ಲಿ  ನಗರಸಭೆಯಿಂದ ಪೂರೈಕೆಯಾಗುವ ಕಲುಷಿತ ನೀರು ಸೇವಿಸಿ 100 ಕ್ಕೂ ಹೆಚ್ಚು ಮಂದಿ ವಾಂತಿ-ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥರಾದ ಕೆಲವರನ್ನು ಪ್ರಸ್ತುತ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ಪಕ್ಕದ ದಾವಣಗೆರೆ ನಗರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...