alex Certify BREAKING : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ : ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲು

ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸಂಸದ ಎ.ರಾಜಾ ವಿರುದ್ಧ ದೂರು ದಾಖಲಾಗಿದೆ.

ಡಿಎಂಕೆ ಸಂಸದ ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗಕ್ಕೆ ಹೋಲಿಸಿದ್ದರು . ಇಂದು ಎ ರಾಜಾ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಲಾಗಿದೆ.ಸಾಮಾಜಿಕ ಕಾರ್ಯಕರ್ತ ಮತ್ತು ವಕೀಲ ವಿನೀತ್ ಜಿಂದಾಲ್ ಅವರು ದೂರು ದಾಖಲಿಸಿದ್ದಾರೆ. ಸನಾತನ ಧರ್ಮವನ್ನು ಅವಮಾನಿಸಲಾಗುತ್ತಿದೆ. ಧರ್ಮದ ಆಧಾರದ ಮೇಲೆ ಸಮಾಜವನ್ನು ವಿಭಜಿಸುತ್ತಿದೆ ಮತ್ತು ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ಅವರು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಎ.ರಾಜಾ, ಸನಾತನ ಧರ್ಮದ ಬಗ್ಗೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯ ಬಗ್ಗೆ ನಡೆಯುತ್ತಿರುವ ವಿವಾದದ ಮಧ್ಯೆ, ಡಿಎಂಕೆ ಸಚಿವ ಮತ್ತು ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠ ರೋಗಗಳಿಗೆ ಹೋಲಿಸಿದ್ದಾರೆ. ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಡಿಎಂಕೆ ಸಂಸದ ಎ ರಾಜಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸನಾತನ ಧರ್ಮ ಏಡ್ಸ್ ಮತ್ತು ಕುಷ್ಟರೋಗವಿದ್ದಂತೆ ಎಂದು ಹೇಳುವ ಮೂಲಕ ಉದಯನಿಧಿ ಹೇಳಿಕೆಗೆ ಬೆಂಬಲ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...