ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಘರ್ಷ ಆರಂಭವಾಗಿದ್ದು, ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸಲು ಆಗ್ರಹಿಸಲಾಗಿದೆ.
ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ನಡೆಸಲು ಅವಕಾಶ ನೀಡಬೇಕು ಎಂದು ಕುಟುಂಬದವರು ಮತ್ತು ಅಭಿಮಾನಿಗಳು ಕೋರಿದ್ದರು. ಆದರೆ, ಸರ್ಕಾರ ಇದಕ್ಕೆ ಒಪ್ಪಿಲ್ಲ ಎನ್ನಲಾಗಿದೆ. ಇದರಿಂದ ಆಕ್ರೋಶ ವ್ಯಕ್ತವಾಗಿದ್ದು, , ಛಲವಾದಿ ಮಹಾಸಭಾಕ್ಕೆ ಸೇರಿದ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸುವಂತೆ ಪಟ್ಟು ಹಿಡಿದಿದ್ದಾರೆ. ಶಿವರಾಮ್ ಓರ್ವ ಮಹಾನ್ ವ್ಯಕ್ತಿ, ಅಂತಹವರಿಗೆ ಸರ್ಕಾರ ಜಾಗ ಕೊಡದಿದ್ದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಬಂದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮುತ್ತಿಗೆ ಹಾಕಲಾಯಿತು.
ಇವತ್ತು ಬೆಂಗಳೂರಿನ ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆಗೆ ಅಂತಿಮ ವಿಧಿವಿಧಾನಗಳ ಮೂಲಕ ಕೆ. ಶಿವರಾಮ್ ಅವರ ಅಂತ್ಯಕ್ರಿಯೆ ನೆರವೇರಲಿದೆ.