alex Certify ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಸಾರಿಗೆ ಒಕ್ಕೂಟಕ್ಕೆ ಕೊಟ್ಟ ಮಾತು ಉಳಿಸಿಕೊಂಡ ಸಚಿವ ರಾಮಲಿಂಗಾ ರೆಡ್ಡಿ: 30ರಲ್ಲಿ 27 ಬೇಡಿಕೆ ಈಡೇರಿಸಲು ಬದ್ಧ

ಬೆಂಗಳೂರು: ಖಾಸಗಿ ಸಾರಿಗೆ ಒಕ್ಕೂಟಕ್ಕೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ, ಚಾಲಕರು, ಮಾಲೀಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಸಚಿವ ರಾಮಲಿಂಗಾರೆಡ್ಡಿ 30 ಬೇಡಿಕೆಗಳ ಪೈಕಿ 27 ಬೇಡಿಕೆ ಈಡೇರಿಸಲು ಬದ್ಧವೆಂದು ಹೇಳಿದ್ದರು.

ಅಂತೆಯೇ ಲಿಖಿತ ರೂಪದಲ್ಲಿ ಪ್ರೊಸೀಡಿಂಗ್ ಕಾಪಿ ಕೇಳಿದ ಸಾರಿಗೆ ಸಂಘಟನೆಗಳು ಮಂಗಳವಾರ ಸಂಜೆಯೊಳಗೆ ಪ್ರೊಸೀಡಿಂಗ್ ಕಾಪಿ ನೀಡದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಬುಧವಾರ ಬೆಳಗ್ಗೆಯಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ್ದು, ಕೊಟ್ಟ ಮಾತಿನಂತೆ 27 ಬೇಡಿಕೆಗಳ ಬಗ್ಗೆ ಸಚಿವರಿಂದ ಪ್ರೊಸೀಡಿಂಗ್ ಕಾಪಿ ನೀಡಲಾಗಿದೆ.

ಸಾರಿಗೆ ಇಲಾಖೆ ಆಯುಕ್ತರ ಮೂಲಕ ಸಚಿವರು ಖಾಸಗಿ ಸಾರಿಗೆ ಒಕ್ಕೂಟಕ್ಕೆ ಪ್ರೊಸೀಡಿಂಗ್ ಕಾಪಿ ನೀಡಿ ಬೇಡಿಕೆ ಈಡೇರಿಸುವ ಕುರಿತಾಗಿ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...