alex Certify ಕಾಪಿರೈಟ್ ಉಲ್ಲಂಘನೆ ಕೇಸ್ ; ಕೋರ್ಟ್ ನಲ್ಲಿ ಹೋರಾಟ ಮಾಡ್ತೀನಿ ಎಂದ ನಟ ರಕ್ಷಿತ್ ಶೆಟ್ಟಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಪಿರೈಟ್ ಉಲ್ಲಂಘನೆ ಕೇಸ್ ; ಕೋರ್ಟ್ ನಲ್ಲಿ ಹೋರಾಟ ಮಾಡ್ತೀನಿ ಎಂದ ನಟ ರಕ್ಷಿತ್ ಶೆಟ್ಟಿ..!

ಬೆಂಗಳೂರು : ಕಾಪಿ ರೈಟ್ ಉಲ್ಲಂಘನೆ ಆರೋಪ ಎದುರಿಸುತ್ತಿರುವ ನಟ ರಕ್ಷಿತ್ ಶೆಟ್ಟಿ ವಿಚಾರಣೆಗಾಗಿ ಇಂದು ಪೊಲೀಸ್ ಠಾಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು ಈ ಬಗ್ಗೆ ಕೋರ್ಟ್ ನಲ್ಲಿ ಹೋರಾಟ ಮಾಡುತ್ತೇನೆ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದರು. ನನ್ನ ಪ್ರಕಾರ ಇದು ಕಾಪಿರೈಟ್ ಅಲ್ಲ. ಕನ್ನಡದ ಹಾಡನ್ನು ಕನ್ನಡದ ಸಿನಿಮಾದಲ್ಲಿ ಬಳಕೆ ಮಾಡುವಂತೆಯೇ ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಕೊಟ್ಟಿರುವ ದೂರಿಗೆ ನಾನು ಕೋರ್ಟ್ ನಲ್ಲಿ ಹೋರಾಟ ಮಾಡುವೆ, ಹಾಡನ್ನು ಸಿನಿಮಾದಲ್ಲಿ ಸಾಂದರ್ಭಿಕವಾಗಿ ಬಳಕೆ ಮಾಡಲಾಗಿದೆ ಅಷ್ಟೇ, ಕಾಪಿರೈಟ್ ಏನು ಹೇಳುತ್ತೆ ಎಂಬುದನ್ನು ಕೋರ್ಟ್ ನಲ್ಲಿ ನೋಡೋಣ ಎಂದರು.

ನ್ಯಾಯ ಎಲ್ಲಿದೆ? ಹಾಗೂ ಗಾಳಿ ಮಾತು ಸಿನಿಮಾದ ಹಾಡುಗಳನ್ನು ಅನಧಿಕೃತವಾಗಿ ರಕ್ಷಿತ್ ಶೆಟ್ಟಿ ತಮ್ಮ ಸಿನಿಮಾದಲ್ಲಿ ಬಳಸಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಎಂಆರ್ ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲಿಸಿದ್ದರು

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...