alex Certify BIG NEWS: ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೋನಾ ನಿನ್ನೆಗಿಂತ ಹೆಚ್ಚಳ, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೋನಾ ನಿನ್ನೆಗಿಂತ ಹೆಚ್ಚಳ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,41,835 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,979 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,97,928 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.04 ರಷ್ಟು ಇದೆ. ರಾಜ್ಯದಲ್ಲಿ 3890 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 340 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2630 ಸಕ್ರಿಯ ಪ್ರಕರಣಗಳು ಇವೆ.

ಬಳ್ಳಾರಿ 14, ಧಾರವಾಡ 11, ಕೊಡಗು 16, ಮೈಸೂರು 15, ಶಿವಮೊಗ್ಗ 10, ತುಮಕೂರು 12 ಹೊಸ ಪ್ರಕರಣ ವರದಿಯಾಗಿವೆ. ಬಾಗಲಕೋಟೆ, ದಾವಣಗೆರೆ, ಹಾವೇರಿ, ಮಂಡ್ಯ, ರಾಯಚೂರು, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 4, ಬೀದರ್, ಧಾರವಾಡ, ಮಂಡ್ಯ, ತುಮಕೂರು, ವಿಜಯಪುರ, ಯಾದಗಿರಿ ಒಂದು ಸೇರಿ 10 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...