alex Certify ರಾಜ್ಯಕ್ಕೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಗುಡ್ ನ್ಯೂಸ್: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 1001 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. 1465 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ 36,374 ಜನ ಸೋಂಕಿತರು ಸಾವನ್ನಪ್ಪಿದ್ದು, 28,34,741 ಜನ ಗುಣಮುಖರಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 28,94 557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 23,419 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.68 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ 165 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 293 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 8215 ಸಕ್ರಿಯ ಪ್ರಕರಣಗಳು ಇವೆ.

ದಕ್ಷಿಣಕನ್ನಡ 115, ಹಾಸನ 90, ಮೈಸೂರು 97, ಉಡುಪಿ 110 ಜನರಿಗೆ ಸೋಂಕು ತಗುಲಿದೆ. ಬಾಗಲಕೋಟೆ 0, ಬಳ್ಳಾರಿ 6, ಬೀದರ್ 1, ಚಾಮರಾಜನಗರ 5, ದಾವಣಗೆರೆ 1, ಧಾರವಾಡ 6, ಗದಗ 5, ಹಾವೇರಿ 4, ಕಲಬುರ್ಗಿ 4, ಕೊಪ್ಪಳ 2, ರಾಯಚೂರು 0, ರಾಮನಗರ 7, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗಲಿದೆ.

ಬೆಳಗಾವಿ 2, ಬೀದರ್ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 1, ಹಾಸನ 2, ಹಾವೇರಿ 2, ಕೊಡಗು 1, ಕೋಲಾರ 2, ಮಂಡ್ಯ 1, ಮೈಸೂರು 2, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...