alex Certify BIG NEWS: 5 ಜಿಲ್ಲೆಗಳಲ್ಲಿ ಶೂನ್ಯ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಯ್ತು ಕೊರೋನಾ –ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ, ದಕ್ಷಿಣ ಕನ್ನಡದಲ್ಲಿ ಹೆಚ್ಚಾಯ್ತು ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1606 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,96,163 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 36,405 ಜನರು ಸಾವನ್ನಪ್ಪಿದ್ದಾರೆ. 28,36,678 ಜನ ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇಕಡ 1.40 ರಷ್ಟು ಇದೆ. ರಾಜ್ಯದಲ್ಲಿ ಇಂದು 1937 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 23,057 ಸಕ್ರಿಯ ಪ್ರಕರಣಗಳು ಇದ್ದು, ಇವತ್ತು 1,14,072 ಪರೀಕ್ಷೆ ನಡೆಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ 467 ಮಂದಿಗೆ ಸೋಂಕು ತಗುಲಿದೆ. 8182 ಸಕ್ರಿಯ ಪ್ರಕರಣಗಳು ಇವೆ. ಇಂದು 497 ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಂದು 31 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 69, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 467, ಬೀದರ್ 0, ಚಾಮರಾಜನಗರ 54, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 38, ಚಿತ್ರದುರ್ಗ 36, ದಕ್ಷಿಣಕನ್ನಡ 357, ದಾವಣಗೆರೆ 11, ಧಾರವಾಡ 8, ಗದಗ 10, ಹಾಸನ 57, ಹಾವೇರಿ 2, ಕಲಬುರ್ಗಿ 0, ಕೊಡಗು 19, ಕೋಲಾರ 28, ಕೊಪ್ಪಳ 0, ಮಂಡ್ಯ 40, ಮೈಸೂರು 162, ರಾಯಚೂರು 2, ರಾಮನಗರ 3, ಶಿವಮೊಗ್ಗ 52, ತುಮಕೂರು 59, ಉಡುಪಿ 78, ಉತ್ತರಕನ್ನಡ 19, ವಿಜಯಪುರ 9, ಯಾದಗಿರಿ 2 ಜನರಿಗೆ ಸೋಂಕು ತಗುಲಿದೆ.

ಮೃತಪಟ್ಟವರ ಸಂಖ್ಯೆ:

ಇವತ್ತು ಬೆಳಗಾವಿ 2, ಬೆಂಗಳೂರು ನಗರ 3, ಚಿಕ್ಕಮಗಳೂರು 1, ದಕ್ಷಿಣಕನ್ನಡ 4, ಹಾಸನ 1, ಹಾವೇರಿ 3, ಕಲಬುರ್ಗಿ 1, ಕೋಲಾರ 2, ಮಂಡ್ಯ 2, ಮೈಸೂರು 3, ರಾಮನಗರ 1, ಶಿವಮೊಗ್ಗ 1, ತುಮಕೂರು 1, ಉಡುಪಿ 1, ಉತ್ತರಕನ್ನಡ 3, ವಿಜಯಪುರ 2 ಸೇರಿದಂತೆ ರಾಜ್ಯದಲ್ಲಿ 31 ಸೋಂಕಿತರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಸಾವಿನ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...