alex Certify ರಾಜ್ಯದಲ್ಲಿಂದು 270 ಜನರಿಗೆ ಕೊರೋನಾ, ನಾಲ್ವರು ಸಾವು: ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 270 ಜನರಿಗೆ ಕೊರೋನಾ, ನಾಲ್ವರು ಸಾವು: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 270 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ನಾಲ್ವರು ಮೃತಪಟ್ಟಿದ್ದಾರೆ. 246 ಗುಣಮುಖರಾಗಿದ್ದಾರೆ.

ಪಾಸಿಟಿವಿಟಿ ದರ ಶೇಕಡ 0.27 ರಷ್ಟು ಇದೆ. ರಾಜ್ಯದಲ್ಲಿ 7271 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 30,04,239 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,309 ಸೋಂಕಿತರು ಮೃತಪಟ್ಟಿದ್ದಾರೆ. 29,58,630 ಜನ ಗುಣಮುಖರಾಗಿದ್ದಾರೆ.

ಬೆಂಗಳೂರಿನಲ್ಲಿ 152 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 126 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5890 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 152, ದಕ್ಷಿಣಕನ್ನಡ 11, ಕೊಡಗು 25, ಮೈಸೂರು 13, ತುಮಕೂರು 14, ಉಡುಪಿ 14 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 2, ಧಾರವಾಡ ಹಾಗೂ ಉಡುಪಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...