alex Certify BIG BREAKING: ಜಿಲ್ಲೆಗಳಲ್ಲೂ ಸಾವಿನ ಸುನಾಮಿ, ಸೋಂಕಿತರ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಜಿಲ್ಲಾವಾರು ಡೀಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಜಿಲ್ಲೆಗಳಲ್ಲೂ ಸಾವಿನ ಸುನಾಮಿ, ಸೋಂಕಿತರ ಸಂಖ್ಯೆ ಭಾರೀ ಏರಿಕೆ – ಇಲ್ಲಿದೆ ಜಿಲ್ಲಾವಾರು ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 44,438 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,46,303 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 239 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 16,250 ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು ಒಂದೇ ದಿನ 20,901 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ ಗುಣಮುಖರಾದವರ ಸಂಖ್ಯೆ 11,85,299 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬರೋಬ್ಬರಿ 4,44,734 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಸೋಂಕಿತರ ವಿವರ:

ಜಿಲ್ಲೆಗಳಲ್ಲಿಯೂ ಕೊರೋನಾ ಸೋಂಕಿತರ ಮತ್ತು ಸಾವಿನ ಸಂಖ್ಯೆ ಭಾರೀ ಏರಿಕೆಯಾಗಿದೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೆಂಗಳೂರು ನಗರ 22,112, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151 ಜನರಿಗೆ ಸೋಂಕು ತಗುಲಿದೆ.

ದಕ್ಷಿಣಕನ್ನಡ 793, ದಾವಣಗೆರೆ 104, ಧಾರವಾಡ 1021, ಗದಗ 191, ಹಾಸನ 1673, ಹಾವೇರಿ 330, ಕಲಬುರ್ಗಿ 1083, ಕೊಡಗು 628, ಕೋಲಾರ 656, ಕೊಪ್ಪಳ 617 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಂಡ್ಯ ಜಿಲ್ಲೆಯಲ್ಲಿ ಇಂದು 1367, ಮೈಸೂರು 2685, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ತುಮಕೂರು 2361, ಉಡುಪಿ 529, ಉತ್ತರಕನ್ನಡ 776, ವಿಜಯಪುರ 274, ಯಾದಗಿರಿ 337 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಮೃತಪಟ್ಟವರ ಸಂಖ್ಯೆ

ರಾಜ್ಯದಲ್ಲಿ ಇವತ್ತು ಒಂದೇ ದಿನ 239 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 115 ಮಂದಿ ಮೃತಪಟ್ಟಿದ್ದು, ಬಾಗಲಕೋಟೆ 5, ಬಳ್ಳಾರಿ 13, ಬೆಂಗಳೂರು ಗ್ರಾಮಾಂತರ 4, ಬೀದರ್ ಜಿಲ್ಲೆಯಲ್ಲಿ 3 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ 19, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 4, ದಾವಣಗೆರೆ 3, ಧಾರವಾಡ 4, ಹಾಸನ 13, ಹಾವೇರಿ 2, ಕಲಬುರಗಿ 5, ಕೋಲಾರ 3, ಮೈಸೂರು 14, ರಾಯಚೂರು 2, ರಾಮನಗರ 3, ಶಿವಮೊಗ್ಗ 7, ತುಮಕೂರು 8, ಉಡುಪಿ 1, ಉತ್ತರಕನ್ನಡ 1, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...