alex Certify BREAKING NEWS: ರಾಜ್ಯದಲ್ಲಿಂದು 1913 ಜನರಿಗೆ ಸೋಂಕು, 48 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯದಲ್ಲಿಂದು 1913 ಜನರಿಗೆ ಸೋಂಕು, 48 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1913 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 28,74,597 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 2489 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 28,04,396 ಗುಣಮುಖರಾಗಿದ್ದಾರೆ. 34,234 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇವತ್ತು 48 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 35,944 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 1.53 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 401 ಜನರಿಗೆ ಸೋಂಕು ತಗುಲಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಇವತ್ತು 707 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 11,91,673 ಜನ ಗುಣಮುಖರಾಗಿದ್ದಾರೆ. 12,671 ಸಕ್ರಿಯ ಪ್ರಕರಣಗಳಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 222 ಕೊರೋನಾ ಪಾಸಿಟಿವ್ ವರದಿ ಬಂದಿದೆ. ಹಾಸನ ಜಿಲ್ಲೆಯಲ್ಲಿ 191, ಮೈಸೂರಿನಲ್ಲಿ 198, ತುಮಕೂರು ಜಿಲ್ಲೆಯಲ್ಲಿ 170 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಇಳಿಮುಖವಾಗುತ್ತಿದೆ. ಆದರೆ, ನಿನ್ನೆಗಿಂತ ಇಂದು ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಅನ್ ಲಾಕ್ ನಂತರ ಜನರ ಓಡಾಟ ಜಾಸ್ತಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...