alex Certify ಕೊರೋನಾ ದಿಢೀರ್ ಏರಿಕೆ: ಮೈಸೂರು 45, ಶಿವಮೊಗ್ಗ 33 ಸೇರಿ ರಾಜ್ಯದಲ್ಲಿಂದು 413 ಜನರಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ದಿಢೀರ್ ಏರಿಕೆ: ಮೈಸೂರು 45, ಶಿವಮೊಗ್ಗ 33 ಸೇರಿ ರಾಜ್ಯದಲ್ಲಿಂದು 413 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 413 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,97,246 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 38,220. ರಾಜ್ಯದಲ್ಲಿ ಇಂದು 256 ಜನರ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,52,101 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.39 ರಷ್ಟು ಇದ್ದು, ರಾಜ್ಯದಲ್ಲಿ 6896 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 212 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 185 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5049 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೀದರ್, ಗದಗ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 212, ದಕ್ಷಿಣಕನ್ನಡ 10, ಧಾರವಾಡ 18, ಹಾಸನ 11, ಮೈಸೂರು 45, ಶಿವಮೊಗ್ಗ 33, ತುಮಕೂರು 30, ಉಡುಪಿ 19 ಹೊಸ ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರ 2, ಕೋಲಾರ ಹಾಗೂ ಮಂಡ್ಯದಲ್ಲಿ ತಲಾ 1 ಸೇರಿದಂತೆ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tři skvělá jídla, která můžete připravit ze 10 věcí, které rozhodně nelze prát v pračce Jak rychle vyčistit Jak se Neobvyklý recept: Kotlety se zelím a Jak pracovat Proč byste neměli zabíjet pavouky: Jak prát kuchyňské utěrky: 7 Budete zhubnout, když budete každý den jíst Psychologové identifikovali nejnebezpečnější 5 tipů, jak ušetřit peníze s myčkou nádobí: