alex Certify ರಾಜ್ಯದಲ್ಲಿಂದು 290 ಜನ ಗುಣಮುಖ, 283 ಮಂದಿಗೆ ಸೋಂಕು: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 290 ಜನ ಗುಣಮುಖ, 283 ಮಂದಿಗೆ ಸೋಂಕು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 283 ಜನರಿಗೆ ಕೊರೊನಾ ಸೋಂಕು ತಗುಲಿದೆ. 290 ಗುಣಮುಖರಾಗಿ ಬಿಡುಗಡೆಯಾಗಿದ್ದು, 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,90,235 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,44,099 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 38,118 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.26 ರಷ್ಟು ಇದೆ. 7989 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 159 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. 104 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6419 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 159, ದಕ್ಷಿಣ ಕನ್ನಡ 10, ಹಾಸನ 24, ಕೋಲಾರ 11, ಮೈಸೂರು 15 ಹೊಸ ಪ್ರಕರಣ ವರದಿಯಾಗಿದೆ.

ಬೆಂಗಳೂರು ನಗರ 1, ಕೊಪ್ಪಳ 1, ತುಮಕೂರು 1, ಮೈಸೂರು 2, ಉಡುಪಿ 1 ಸೇರಿ ರಾಜ್ಯದಲ್ಲಿ 6 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...