alex Certify BIG BREAKING: ರಾಜ್ಯದಲ್ಲಿಂದು 1639 ಜನರಿಗೆ ಸೋಂಕು; ಬೀದರ್, ಯಾದಗಿರಿ ಶೂನ್ಯ -ಇಲ್ಲಿದೆ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿಂದು 1639 ಜನರಿಗೆ ಸೋಂಕು; ಬೀದರ್, ಯಾದಗಿರಿ ಶೂನ್ಯ -ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 1639 ಜನರಿಗೆ ಸೋಂಕು ತಗುಲಿದ್ದು, 36 ಮಂದಿ ಮೃತಪಟ್ಟಿದ್ದಾರೆ. 2214 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ 25,645 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 1.07 ರಷ್ಟು ಇದೆ. ಒಟ್ಟು ಸೋಂಕಿತರ ಸಂಖ್ಯೆ 28,88,341 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,262 ಸಾವನ್ನಪ್ಪಿದ್ದು, 28, 26,411 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 419 ಜನರಿಗೆ ಸೋಂಕು ತಗುಲಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. 963 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 9495 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ

ಬಾಗಲಕೋಟೆ 3, ಬಳ್ಳಾರಿ 14, ಬೆಳಗಾವಿ 61, ಬೆಂಗಳೂರು ಗ್ರಾಮಾಂತರ 25, ಬೆಂಗಳೂರು ನಗರ 419, ಬೀದರ್ 0, ಚಾಮರಾಜನಗರ 22, ಚಿಕ್ಕಬಳ್ಳಾಪುರ 15, ಚಿಕ್ಕಮಗಳೂರು 92, ಚಿತ್ರದುರ್ಗ 29, ದಕ್ಷಿಣಕನ್ನಡ 190, ದಾವಣಗೆರೆ 13 ಜನರಿಗೆ ಸೋಂಕು ತಗುಲಿದೆ.

ಧಾರವಾಡ 19, ಗದಗ 1, ಹಾಸನ 141, ಹಾವೇರಿ 2, ಕಲಬುರಗಿ 2, ಕೊಡಗು 63, ಕೋಲಾರ 35, ಕೊಪ್ಪಳ 5, ಮಂಡ್ಯ 60, ಮೈಸೂರು 160, ರಾಯಚೂರು 1, ರಾಮನಗರ 5 ಶಿವಮೊಗ್ಗ 37, ತುಮಕೂರು 63, ಉಡುಪಿ 104, ಉತ್ತರಕನ್ನಡ 48, ವಿಜಯಪುರ 10, ಯಾದಗಿರಿ 0 ಜನರಿಗೆ ಸೋಮಕು ತಗುಲಿದೆ.

ಸಾವಿನ ಸಂಖ್ಯೆ

ಬಾಗಲಕೋಟೆ 1, ಬೆಳಗಾವಿ 1, ಬೆಂಗಳೂರು ನಗರ 7, ಚಾಮರಾಜನಗರ 2, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 1, ದಕ್ಷಿಣಕನ್ನಡ 6, ದಾವಣಗೆರೆ 1, ಧಾರವಾಡ 2, ಹಾಸನ 3, ಕೋಲಾರ 3, ಮಂಡ್ಯ 1, ಮೈಸೂರು 1, ಶಿವಮೊಗ್ಗ 2, ತುಮಕೂರು 1, ಉಡುಪಿ 1, ಉತ್ತರಕನ್ನಡ 1, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಯಾದಗಿರಿ, ರಾಮನಗರ, ರಾಯಚೂರು, ಕೊಪ್ಪಳ, ಕೊಡಗು, ಕಲಬುರ್ಗಿ, ಹಾವೇರಿ, ಗದಗ, ಚಿಕ್ಕಮಗಳೂರು, ಬೀದರ್, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...