alex Certify ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಒಂದೇ ದಿನ 6150 ಜನರಿಗೆ ಸೋಂಕು. 39 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಒಂದೇ ದಿನ 6150 ಜನರಿಗೆ ಸೋಂಕು. 39 ಮಂದಿ ಸಾವು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಭಾರಿ ಸ್ಪೋಟವಾಗಿದ್ದು, ಇವತ್ತು ಒಂದೇ ದಿನ 6150 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಒಟ್ಟು ಸೋಂಕಿತರ ಸಂಖ್ಯೆ 10,26,584 ಕ್ಕೆ ಏರಿಕೆಯಾಗಿದೆ. ಇವತ್ತು 3487 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,68,762 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಒಂದೇ ದಿನ 39 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,696 ಜನ ಸಾವನ್ನಪ್ಪಿದ್ದಾರೆ.

45,107 ಸಕ್ರಿಯ ಪ್ರಕರಣಗಳಿದ್ದು 351 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕೂಡ ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ 4266 ಜನರಿಗೆ ಸೋಂಕು ತಗಲಿದೆ. 26 ಜನ ಸೋಂಕಿತರು ಮೃತಪಟ್ಟಿದ್ದಾರೆ. 32605 ಸಕ್ರಿಯ ಪ್ರಕರಣಗಳು ಇವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...