alex Certify ಬೆಂಗಳೂರಲ್ಲಿ ಕೊರೋನಾ ಸ್ಪೋಟ, ಸಾವಿರದ ಗಡಿ ದಾಟಿದ ಹೊಸ ಕೇಸ್; ರಾಜ್ಯದಲ್ಲಿ ಸಕ್ರಿಯ ಪ್ರಕರಣ ದಿಢೀರ್ ಏರಿಕೆ-ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಕೊರೋನಾ ಸ್ಪೋಟ, ಸಾವಿರದ ಗಡಿ ದಾಟಿದ ಹೊಸ ಕೇಸ್; ರಾಜ್ಯದಲ್ಲಿ ಸಕ್ರಿಯ ಪ್ರಕರಣ ದಿಢೀರ್ ಏರಿಕೆ-ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1290 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 232 ಗುಣಮುಖರಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 30,10,847 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,61,122 ಜನ ಗುಣಮುಖರಾಗಿದ್ದಾರೆ. 38,351 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 11,345 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 1.60 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 1041 ಜನರಿಗೆ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 134 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9575 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ, ಚಾಮರಾಜನಗರ, ಹಾವೇರಿ, ರಾಮನಗರ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬಳ್ಳಾರಿ 11, ಬೆಳಗಾವಿ 14, ಬೆಂಗಳೂರು ನಗರ 1041, ದಕ್ಷಿಣ ಕನ್ನಡ 52, ಧಾರವಾಡ 19, ಹಾಸನ 11, ಕೊಡಗು 10, ಮಂಡ್ಯ 13, ಮೈಸೂರು 14, ಶಿವಮೊಗ್ಗ 13, ಉಡುಪಿ 43 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ನಗರ 3, ಚಿತ್ರದುರ್ಗ, ಹಾಸನ ತಲಾ ಒಬ್ಬರು ಸೇರಿ ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...