alex Certify BIG BREAKING NEWS: ಜುಲೈನಲ್ಲಿ SSLC ಪರೀಕ್ಷೆ, ಎಲ್ಲರೂ ಪಾಸ್ – ಸಚಿವ ಸುರೇಶ್ ಕುಮಾರ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಜುಲೈನಲ್ಲಿ SSLC ಪರೀಕ್ಷೆ, ಎಲ್ಲರೂ ಪಾಸ್ – ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 8.75 ಲಕ್ಷ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದೆ. ಸಿಬಿಎಸ್ಇ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ ಕೋರ್ ಸಬ್ಜೆಕ್ಟ್ ಪರೀಕ್ಷೆ. ಮಲ್ಟಿ ಚಾಯ್ಸ್ ಪ್ರಶ್ನೆಗಳ ಮಾದರಿಯಲ್ಲಿ ಸರಳವಾಗಿ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಶ್ನೆಗಳು ಸರಳವಾಗಿರುತ್ತವೆ. ಇನ್ನೊಂದು ಪತ್ರಿಕೆ ಭಾಷೆ ಪರೀಕ್ಷೆ ನಡೆಯಲಿದೆ. ಮಕ್ಕಳನ್ನು ಫೇಲ್ ಮಾಡಲು ಪರೀಕ್ಷೆ ಮಾಡುತ್ತಿಲ್ಲ. ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆ ಮಾಡಲಾಗುವುದು. ಯಾರನ್ನೂ ಫೇಲ್ ಮಾಡಲ್ಲ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು. ಪ್ರೌಢಶಿಕ್ಷಣ ಮಂಡಳಿ ಮಾರ್ಗಸೂಚಿ ನೀಡಲಿದೆ ಎಂದು ಹೇಳಿದ್ದಾರೆ.

ನಾವು ಜುಲೈ ಮೂರನೇ ವಾರ ನಡೆಸುವ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. 10 ದಿನ ಮೊದಲು ದಿನಾಂಕ ಪ್ರಕಟಿಸಲಾಗುವುದು. ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಮತ್ತೊಮ್ಮೆ ಫ್ರೆಷರ್ಸ್ ರೀತಿಯಲ್ಲಿ ಪರೀಕ್ಷೆ ನಡೆಯಲಿದೆ. 6 ಸಾವಿರ ಪರಿಕ್ಷಾ ಕೇಂದ್ರಗಳಲ್ಲಿ 1 ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿ ಕೂರಿಸಿ ಪರೀಕ್ಷೆ ನಡೆಸಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಎನ್ 95 ಮಾಸ್ಕ್ ನೀಡಲಾಗುವುದು. ಸರಳ ಪ್ರಶ್ನೆಗಳೊಂದಿಗೆ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...