![](https://kannadadunia.com/wp-content/uploads/2021/10/30_09_2021-corona_alert_22070008.jpg)
ಬೆಂಗಳೂರು: ರಾಜ್ಯದಲ್ಲಿ ಇಂದು 290 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,017 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 408 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 29,39,647 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 8583 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.32 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 137 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6421 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಮಾಹಿತಿ:
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೀದರ್ 0, ಚಿಕ್ಕಬಳ್ಳಾಪುರ 0, ಚಿತ್ರದುರ್ಗ 1, ದಾವಣಗೆರೆ 0, ಗದಗ 0, ಹಾವೇರಿ 0, ಕೊಪ್ಪಳ 1, ರಾಯಚೂರು 0, ರಾಮನಗರ 0, ವಿಜಯಪುರ 1, ಯಾದಗಿರಿ 0, ಬೆಂಗಳೂರು ನಗರ 137, ದಕ್ಷಿಣಕನ್ನಡ 30, ಹಾಸನ 20, ತುಮಕೂರು 26 ಹೊಸ ಪ್ರಕರಣ ವರದಿಯಾಗಿವೆ.
ಮೃತಪಟ್ಟವರ ಸಂಖ್ಯೆ:
ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 6, ಧಾರವಾಡ 1, ರಾಮನಗರ 1, ಸೇರಿ ರಾಜ್ಯದಲ್ಲಿ 10 ಜನರು ಮೃತಪಟ್ಟಿದ್ದಾರೆ.
![](https://kannadadunia.com/wp-content/uploads/2021/10/oct-25-corona-A.jpg)
![](https://kannadadunia.com/wp-content/uploads/2021/10/oct-25-corona-B.jpg)