alex Certify ಬೆಂಗಳೂರು 157 ಸೇರಿ ರಾಜ್ಯದಲ್ಲಿಂದು 261 ಮಂದಿಗೆ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು 157 ಸೇರಿ ರಾಜ್ಯದಲ್ಲಿಂದು 261 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 261 ಜನರಿಗೆ ಸೋಂಕು ತಗುಲಿದ್ದು, 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 296 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,89,275 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,42,884 ಜನ ಗುಣಮುಖರಾಗಿದ್ದಾರೆ. 38,095  ಸೋಂಕಿತರು ಸಾವನ್ನಪ್ಪಿದ್ದಾರೆ. ಪಾಸಿಟಿವಿಟಿ ದರ ಶೇಕಡ 0.48 ರಷ್ಟು ಇದೆ. ರಾಜ್ಯದಲ್ಲಿ 8267 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 157 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಮೃತಪಟ್ಟಿದ್ದಾರೆ. 171 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6381 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 0, ಬೆಂಗಳೂರು ಗ್ರಾಮಾಂತರ 1, ಬೀದರ್ 1, ಚಾಮರಾಜನಗರ 1, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 0, ದಾವಣಗೆರೆ 0, ಗದಗ 0, ಹಾವೇರಿ 0, ಕೊಪ್ಪಳ 0, ರಾಯಚೂರು 0, ರಾಮನಗರ 1, ಯಾದಗಿರಿ 0, ಬೆಂಗಳೂರು 157, ದಕ್ಷಿಣಕನ್ನಡ 16, ಮೈಸೂರು 13, ತುಮಕೂರು 15 ಹೊಸ ಪ್ರಕರಣ ವರದಿಯಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 1, ದಕ್ಷಿಣಕನ್ನಡ 1, ಹಾಸನ 1, ಮೈಸೂರು 2 ಸೇರಿ ರಾಜ್ಯದಲ್ಲಿ 5 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...