alex Certify ರಾಜ್ಯದಲ್ಲಿಂದು 227 ಜನರಿಗೆ ಸೋಂಕು, ಇಬ್ಬರು ಸಾವು: ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 227 ಜನರಿಗೆ ಸೋಂಕು, ಇಬ್ಬರು ಸಾವು: ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 227 ಜನರಿಗೆ ಸೋಂಕು ತಗುಲಿದ್ದು ಇಬ್ಬರು ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,91,369 ಏರಿಕೆಯಾಗಿದ್ದು, ಇದುವರೆಗೆ 38,140 ಸೋಂಕಿತರು ಸಾವನ್ನಪ್ಪಿದ್ದಾರೆ. 29,45,164 ಜನ ಗುಣಮುಖರಾಗಿದ್ದಾರೆ. 8036 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.22 ರಷ್ಟು ಇದೆ.

ಬೆಂಗಳೂರಿನಲ್ಲಿ 147 ಜನರಿಗೆ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದಾರೆ. 62 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6646 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೀದರ್, ದಾವಣಗೆರೆ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 147, ದಕ್ಷಿಣಕನ್ನಡ 14, ಮೈಸೂರು 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು 1 ಹಾಗೂ ಮೈಸೂರಿನಲ್ಲಿ 1 ಸೇರಿ ರಾಜ್ಯದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...