alex Certify BIG NEWS: 5 ಜಿಲ್ಲೆಗಳಲ್ಲಿ ಶೂನ್ಯ ಕೇಸ್, ದಕ್ಷಿಣ ಕನ್ನಡದಲ್ಲಿ 10 ಮಂದಿ ಜೀವ ತೆಗೆದ ಕೊರೋನಾ –ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 5 ಜಿಲ್ಲೆಗಳಲ್ಲಿ ಶೂನ್ಯ ಕೇಸ್, ದಕ್ಷಿಣ ಕನ್ನಡದಲ್ಲಿ 10 ಮಂದಿ ಜೀವ ತೆಗೆದ ಕೊರೋನಾ –ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,213 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,43,463 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 28,86,906 ಜನ ಗುಣಮುಖರಾಗಿದ್ದಾರೆ. 37, 231 ಜನ ಮೃತಪಟ್ಟಿದ್ದಾರೆ.

19,300 ಸಕ್ರಿಯ ಪ್ರಕರಣಗಳು ಇವೆ. ಇವತ್ತು 1,87,187 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.64 ರಷ್ಟು ಇದೆ. 1206 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 319 ಜನರಿಗೆ ಸೋಂಕು ತಗುಲಿದ್ದು, 205 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದು, 7343 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಮಾಹಿತಿ

ಬಾಗಲಕೋಟೆ 0, ಬಳ್ಳಾರಿ 5, ಬೆಂಗಳೂರು ಗ್ರಾಮಾಂತರ 9, ಬೀದರ್ 0, ಚಿಕ್ಕಬಳ್ಳಾಪುರ 4, ಚಿತ್ರದುರ್ಗ 9, ಗದಗ 1, ಹಾವೇರಿ 1, ಕಲಬುರಗಿ 5, ಕೊಪ್ಪಳ 3, ರಾಯಚೂರು 0, ರಾಮನಗರ 4, ವಿಜಯಪುರ 0, ಯಾದಗಿರಿ 0 ಪ್ರಕರಣ ವರದಿಯಾಗಿದೆ

ಬೆಂಗಳೂರು ನಗರ 319, ದಕ್ಷಿಣಕನ್ನಡ 269, ಹಾಸನ 90, ಕೊಡಗು 65, ಮೈಸೂರು 98, ಶಿವಮೊಗ್ಗ 44, ಉಡುಪಿ 113 ಪ್ರಕರಣ ವರದಿಯಾಗಿದೆ.

ಮೃತರ ಸಂಖ್ಯೆ

ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 2, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 10, ಧಾರವಾಡ 2, ಹಾವೇರಿ 1, ಕೊಡಗು 1, ಮೈಸೂರು 3, ತುಮಕೂರು 1, ಉಡುಪಿ 2 ಸೇರಿ ರಾಜ್ಯದಲ್ಲಿ 25 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...