alex Certify ರಾಜ್ಯದಲ್ಲಿಂದು 373 ಮಂದಿಗೆ ಸೋಂಕು, ಇಲ್ಲಿದೆ ಡಿಟೇಲ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 373 ಮಂದಿಗೆ ಸೋಂಕು, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 373 ಜನರಿಗೆ ಸೋಂಕು ತಗುಲಿದೆ. 611 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇವತ್ತು 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರಕ್ಕಿಂತ ಕೆಳಗಿಳಿದಿದ್ದು, 9906 ಸಕ್ರಿಯ ಪ್ರಕರಣಗಳಿವೆ. ಇಂದು 82,853 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 1.41 ರಷ್ಟಿದೆ.

ಒಟ್ಟು ಸೋಂಕಿತರ ಸಂಖ್ಯೆ 29,81,400 ಕ್ಕೆ ಏರಿಕೆಯಾಗಿದೆ. ಇದುವರೆಗೆ 29,33,570 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 37,895 ಜನ ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು 146 ಮಂದಿಗೆ ಸೋಂಕು ತಗುಲಿದ್ದು, 210 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5 ಸೋಂಕಿತರು ಮೃತಪಟ್ಟಿದ್ದಾರೆ. 6580 ಸಕ್ರಿಯ ಪ್ರಕರಣಗಳು ಇವೆ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 0, ಚಿತ್ರದುರ್ಗ 1, ದಾವಣಗೆರೆ 2, ಧಾರವಾಡ 2, ಗದಗ 0, ಕೊಪ್ಪಳ 1, ರಾಯಚೂರು 2, ರಾಮನಗರ 1, ವಿಜಯಪುರ 0, ಯಾದಗಿರಿ 0, ಬೆಂಗಳೂರು ನಗರ 146, ದಕ್ಷಿಣಕನ್ನಡ 38, ಹಾಸನ 38, ಮೈಸೂರು 43 ಪ್ರಕರಣ ವರದಿಯಾಗಿವೆ.

ಮೃತಪಟ್ಟವರ ಸಂಖ್ಯೆ:

ಬೆಂಗಳೂರು ನಗರ 5, ಧಾರವಾಡ 1, ಮೈಸೂರು 2, ಉತ್ತರ ಕನ್ನಡ 2 ಸೇರಿ ರಾಜ್ಯದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...