alex Certify ರಾಜ್ಯದಲ್ಲಿ ಕೊರೋನಾದಿಂದ 5 ಜನ ಸಾವು: 8002 ಸಕ್ರಿಯ ಪ್ರಕರಣ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಕೊರೋನಾದಿಂದ 5 ಜನ ಸಾವು: 8002 ಸಕ್ರಿಯ ಪ್ರಕರಣ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 239 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 5 ಜನ ಸೋಂಕಿತರು ಮೃತಪಟ್ಟಿದ್ದಾರೆ. 322 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 38,112 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 29,43,809 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 8002 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ಬೆಂಗಳೂರಿನಲ್ಲಿ 151 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 150 ಜನ ಗುಣಮುಖರಾಗಿದ್ದಾರೆ. 6365 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಮನಗರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 151, ದಕ್ಷಿಣಕನ್ನಡ 11, ಹಾಸನ 12, ಮೈಸೂರು 17, ಉತ್ತರ ಕನ್ನಡ 12 ಹೊಸ ಪ್ರಕರಣ ವರದಿಯಾಗಿವೆ.

ಬೆಳಗಾವಿ 1 ಬೆಂಗಳೂರು ನಗರ 2, ಮೈಸೂರು 2 ಸೇರಿ ರಾಜ್ಯದಲ್ಲಿ 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...