alex Certify BREAKING: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು ಕೊರೋನಾ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 236 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 264 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,45,679 ಜನ ಗುಣಮುಖರಾಗಿದ್ದಾರೆ. 38,145 ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 0.24 ರಷ್ಟು ಇದೆ. ರಾಜ್ಯದಲ್ಲಿ 7997 ಸಕ್ರಿಯ ಪ್ರಕರಣಗಳು ಇವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 152 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. 187 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6600 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 152, ದಕ್ಷಿಣಕನ್ನಡ 11, ಮೈಸೂರು 10 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಯಾವುದೇ ಸಾವಿನ ವರದಿಯಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...