alex Certify BREAKING: ಒಮಿಕ್ರಾನ್ ಆತಂಕದ ಹೊತ್ತಲ್ಲೇ ರಾಜ್ಯದಲ್ಲಿಂದು ಕೊರೋನಾ ಏರಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಮಿಕ್ರಾನ್ ಆತಂಕದ ಹೊತ್ತಲ್ಲೇ ರಾಜ್ಯದಲ್ಲಿಂದು ಕೊರೋನಾ ಏರಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಏರಿಕೆ ಕಂಡಿದ್ದು, 405 ಜನರಿಗೆ ಪಾಸಿಟಿವ್ ವರದಿ ಬಂದಿದೆ. ನಾಲ್ವರು ಮೃತಪಟ್ಟಿದ್ದಾರೆ. 267 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಪಾಸಿಟಿವಿಟಿ ದರ ಶೇಕಡ 0.35 ರಷ್ಟಿದೆ. ರಾಜ್ಯದಲ್ಲಿ 7251 ಸಕ್ರಿಯ ಪ್ರಕರಣಗಳು ಇವೆ. ಒಟ್ಟು ಸೋಂಕಿತರ ಸಂಖ್ಯೆ 30,03,969 ಕ್ಕೆ ಏರಿಕೆಯಾಗಿದೆ. ಇದುವರೆಗೆ 38,305 ಸೋಂಕಿತರು ಸಾವನ್ನಪ್ಪಿದ್ದಾರೆ. 29,58,384 ಜನ ಗುಣಮುಖರಾಗಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 254 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ. 128 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 5856 ಸಕ್ರಿಯ ಪ್ರಕರಣಗಳು ಇವೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ.

ಬೆಂಗಳೂರು ನಗರ 254, ದಕ್ಷಿಣಕನ್ನಡ 20, ಕೊಡಗು 12, ಕೋಲಾರ 18, ಮೈಸೂರು 13, ತುಮಕೂರು 16, ಉಡುಪಿ 13, ಉತ್ತರಕನ್ನಡ 32 ಹೊಸ ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರ 2, ಮೈಸೂರು, ಬೆಳಗಾವಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...