alex Certify BREAKING NEWS: ಮೈಸೂರು, ಹಾಸನ, ಮಂಡ್ಯ, ತುಮಕೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರು, ಹಾಸನ, ಮಂಡ್ಯ, ತುಮಕೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 46,426 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 32 ಜನ ಸೋಂಕಿತರು ಮೃತಪಟ್ಟಿದ್ದಾರೆ. 41,703 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 35,64,108 ಏರಿಕೆಯಾಗಿದೆ. ಇದುವರೆಗೆ 38,614 ಜನ ಸೋಂಕಿತರು ಮೃತಪಟ್ಟಿದ್ದಾರೆ.  31,62,977 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 3.62.487 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 32.95 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 21,569 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 9 ಜನ ಸೋಂಕಿತರು ಮೃತಪಟ್ಟಿದ್ದಾರೆ. 27,008 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 2,26,385 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ಗ್ರಾಮಾಂತರ 1607, ಧಾರವಾಡ 1407, ಹಾಸನ 1908, ಮಂಡ್ಯ 1837, ಮೈಸೂರು 4105, ತುಮಕೂರು 2960 ಹೊಸ ಪ್ರಕರಣ ವರದಿಯಾಗಿವೆ.

ಬೆಂಗಳೂರು ನಗರ 9, ದಕ್ಷಿಣ ಕನ್ನಡ 3, ಹಾವೇರಿ, ಕಲಬುರಗಿ ತಲಾ 2, ಉಡುಪಿ 3 ಸೇರಿದಂತೆ ರಾಜ್ಯದಲ್ಲಿ 32 ಸೋಂಕಿತರು ಮೃತಪಟ್ಟಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...