alex Certify BREAKING: ರಾಜ್ಯದಲ್ಲಿಂದು 50 ಜನರ ಜೀವ ತೆಗೆದ ಕೊರೋನಾ, 71 ಸಾವಿರ ಮಂದಿ ಗುಣಮುಖ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದಲ್ಲಿಂದು 50 ಜನರ ಜೀವ ತೆಗೆದ ಕೊರೋನಾ, 71 ಸಾವಿರ ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳು ಇಳಿಮುಖವಾಗಿದ್ದು, 31,198 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸಾವಿನ ಸಂಖ್ಯೆ ಏರಿಕೆಯಾಗಿದ್ದು, 50 ಜನ ಸೋಂಕಿತರು ಇವತ್ತು ಸಾವನ್ನಪ್ಪಿದ್ದಾರೆ. ಇದುವರೆಗೆ 38,804 ಜನ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 37,23,694 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 71,092 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 33,96,093 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ 20.91 ರಷ್ಟು ಇದೆ. 2,88,767 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 15,199 ಜನರಿಗೆ ಸೋಂಕು ತಗುಲಿದ್ದು, 8 ಜನ ಮೃತಪಟ್ಟಿದ್ದಾರೆ. 44,866 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 1,60,178 ಸಕ್ರಿಯ ಪ್ರಕರಣಗಳಿವೆ.

ಬಳ್ಳಾರಿ 709, ಬೆಳಗಾವಿ 725, ಧಾರವಾಡ 1500, ಹಾಸನ 1037, ಮಂಡ್ಯ 963, ಮೈಸೂರು 1877, ತುಮಕೂರು 1315, ಉಡುಪಿ 818 ಹೊಸ ಪ್ರಕರಣ ವರದಿಯಾಗಿವೆ.

ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 8, ಬೀದರ್ 1, ಚಾಮರಾಜನಗರ 1, ಚಿತ್ರದುರ್ಗ 1, ದಕ್ಷಿಣಕನ್ನಡ 4, ದಾವಣಗೆರೆ 1, ಗದಗ 1, ಹಾಸನ 5, ಹಾವೇರಿ 2, ಕಲಬುರ್ಗಿ 1, ಕೊಡಗು 1, ಕೋಲಾರ 1, ಕೊಪ್ಪಳ 1, ಮೈಸೂರು 8, ರಾಮನಗರ 2, ಶಿವಮೊಗ್ಗ 3, ತುಮಕೂರು 4, ಉತ್ತರಕನ್ನಡ 1 ಸೇರಿ ರಾಜ್ಯದಲ್ಲಿ 50 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...