alex Certify BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,41,063 ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39,950 ಸೋಂಕಿತರು ಮೃತಪಟ್ಟಿದ್ದಾರೆ. 38,95,452 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 5623 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.70 ರಷ್ಟು ಇದೆ.

ಬೆಂಗಳೂರಿನಲ್ಲಿ ಇಂದು ಹೊಸದಾಗಿ 161 ಜನರಿಗೆ ಕೊರೋನಾ ಸೋಂಕು ತಗುಲಿದೆ. 10 ಜನ ಮೃತಪಟ್ಟಿದ್ದಾರೆ. 550 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3249 ಸಕ್ರಿಯ ಪ್ರಕರಣಗಳಿವೆ.

ದಕ್ಷಿಣ ಕನ್ನಡ 13, ಮೈಸೂರು 11, ಶಿವಮೊಗ್ಗ 10, ತುಮಕೂರು 14 ಹೊಸ ಪ್ರಕರಣ ವರದಿಯಾಗಿವೆ. ಯಾದಗಿರಿ, ರಾಮನಗರ, ಮಂಡ್ಯ, ಹಾವೇರಿ, ರಾಯಚೂರು, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 10, ಬಳ್ಳಾರಿ, ಹಾಸನ, ಕೊಪ್ಪಳ, ಮಂಡ್ಯ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...