alex Certify BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರೀ ಇಳಿಕೆ –ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯಕ್ಕೆ ಗುಡ್ ನ್ಯೂಸ್, ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಭಾರೀ ಇಳಿಕೆ –ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1151 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇದುವರೆಗೆ 29,39,767 ಜನರಿಗೆ ಸೋಂಕು ತಗುಲಿದೆ. ಇವತ್ತು 1442 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 28,82,331 ಜನ ಇದುವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

20,255 ಸಕ್ರಿಯ ಪ್ರಕರಣಗಳು ಇವೆ. ಇವತ್ತು 10 ಜನ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 37,155 ಜನ ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇಕಡ 1.08 ರಷ್ಟು ಇದೆ.

ಬೆಂಗಳೂರಿನಲ್ಲಿ 270 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 363 ಜನ ಗುಣಮುಖರಾಗಿ ಬಿಡುಗಡೆ ಯಾಗಿದ್ದು, 7569 ಸಕ್ರಿಯ ಪ್ರಕರಣಗಳು ಇವೆ. ಇವತ್ತು ಸಾವಿನ ಪ್ರಕರಣ ವರದಿಯಾಗಿಲ್ಲ.

ಜಿಲ್ಲಾವಾರು ಮಾಹಿತಿ:

ಬಾಗಲಕೋಟೆ 0, ಬಳ್ಳಾರಿ 4, ಬೀದರ್ 0, ಚಾಮರಾಜನಗರ 5, ಚಿಕ್ಕಬಳ್ಳಾಪುರ 4, ದಾವಣಗೆರೆ 1, ಧಾರವಾಡ 0, ಗದಗ 3, ಹಾವೇರಿ 1, ಕೋಲಾರ 7, ಕೊಪ್ಪಳ 5, ರಾಯಚೂರು 0, ರಾಮನಗರ 1, ಶಿವಮೊಗ್ಗ 8, ವಿಜಯಪುರ 2, ಯಾದಗಿರಿ 5 ಪ್ರಕರಣ ವರದಿಯಾಗಿವೆ.

ಉತ್ತರಕನ್ನಡ 42, ಉಡುಪಿ 137, ತುಮಕೂರು 44, ಮೈಸೂರು 76, ಮಂಡ್ಯ 32, ಕೊಡಗು 54, ಹಾಸನ 115, ದಕ್ಷಿಣಕನ್ನಡ 236, ಚಿಕ್ಕಮಗಳೂರು 42, ಬೆಂಗಳೂರು ನಗರ 270 ಪ್ರಕರಣ ದಾಖಲಾಗಿದೆ.

ಮೃತಪಟ್ಟವರ ಸಂಖ್ಯೆ:

ಬೆಳಗಾವಿ 1, ದಕ್ಷಿಣ ಕನ್ನಡ 3, ಹಾಸನ 2, ಕೊಡಗು 1, ಮೈಸೂರು 1, ತುಮಕೂರು 1, ಉಡುಪಿ 1 ಸೇರಿ ರಾಜ್ಯದಲ್ಲಿ 10 ಜನ ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...