alex Certify ರಾಜ್ಯದಲ್ಲಿಂದು 789 ಜನರಿಗೆ ಸೋಂಕು, 23 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 789 ಜನರಿಗೆ ಸೋಂಕು, 23 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ 789 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 23 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಇದುವರೆಗೆ 37,706 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇಂದು 1050 ಸೋಂಕಿತರು ಗುಣಮುಖರಾಗಿದ್ದು 13,306 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ 0.58 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 285 ಜನರಿಗೆ ಸೋಂಕು ತಗುಲಿದ್ದು, 8 ಜನ ಸಾವನ್ನಪ್ಪಿದ್ದಾರೆ. 273 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 7443 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ 0, ಬೀದರ್ 2, ಚಿಕ್ಕಬಳ್ಳಾಪುರ 1, ಚಿತ್ರದುರ್ಗ 5, ಧಾರವಾಡ 5, ಗದಗ 1, ಹಾವೇರಿ 1, ಕಲ್ಬುರ್ಗಿ 2, ಕೊಪ್ಪಳ 0, ರಾಯಚೂರು 0, ರಾಮನಗರ 2, ವಿಜಯಪುರ 1 ಹಾಗೂ ಯಾದಗಿರಿ 1 ಪ್ರಕರಣ ವರದಿಯಾಗಿದೆ. ಬೆಂಗಳೂರು ನಗರ 285, ದಕ್ಷಿಣಕನ್ನಡ 108, ಮೈಸೂರು 71, ಉಡುಪಿ 69 ಹೊಸ ಪ್ರಕರಣ ವರದಿಯಾಗಿವೆ.

ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 8, ದಕ್ಷಿಣ ಕನ್ನಡ 3, ಮೈಸೂರು 3 ಸೇರಿದಂತೆ ರಾಜ್ಯದಲ್ಲಿ ಇಂದು 23 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...