alex Certify ನಿಗಮ-ಮಂಡಳಿ ನೇಮಕ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಗಮ-ಮಂಡಳಿ ನೇಮಕ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಪಕ್ಷ ನಿಷ್ಠರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ.

ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಅಧಿಕಾರ ನೀಡಿದರೆ ಸಂಘಟನೆಗೆ ಅನುಕೂಲವಾಗುತ್ತದೆ. ಅಲ್ಲದೇ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಬೇಸರವನ್ನು ದೂರ ಮಾಡಬಹುದು. ಹೀಗಾಗಿ, ತಕ್ಷಣವೇ ನಿಗಮ, ಮಂಡಳಿಗಳಿಗೆ ನೇಮಕಾತಿ ಮಾಡುವ ಕುರಿತು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

ನಿಗಮ, ಮಂಡಳಿ ನೇಮಕಾತಿ ಕುರಿತಾಗಿ ಚರ್ಚೆ ನಡೆಸಿ ಮುಂದಿನ ಹಂತದಲ್ಲಿ ನೇಮಕಾತಿಯ ಸಂದರ್ಭದಲ್ಲಿ ನಿಷ್ಠಾವಂತರಿಗೆ ಆದ್ಯತೆ ನೀಡಬೇಕೆಂದು ನಾಯಕರು ಸಲಹೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...