alex Certify ಮನೆ ಮೇಲೆ ಮಳೆ ನೀರು ತೆರವುಗೊಳಿಸುವಾಗಲೇ ಅವಘಡ: ವಿದ್ಯುತ್ ಪ್ರವಹಿಸಿ ದಂಪತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಮೇಲೆ ಮಳೆ ನೀರು ತೆರವುಗೊಳಿಸುವಾಗಲೇ ಅವಘಡ: ವಿದ್ಯುತ್ ಪ್ರವಹಿಸಿ ದಂಪತಿ ಸಾವು

ಬಳ್ಳಾರಿ: ಮಳೆಯಿಂದಾಗಿ ಮನೆಯ ಮೇಲೆ ನಿಂತುಕೊಂಡಿದ್ದ ನೀರು ತೆರವುಗೊಳಿಸುವ ವೇಳೆ ವಿದ್ಯುತ್ ಪ್ರವಹಿಸಿ ದಂಪತಿ ಮೃತಪಟ್ಟಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಯಲಾಟ ಕಲಾವಿದ ಪಂಪಾಪತಿ(68) ಮತ್ತು ಅವರ ಪತ್ನಿ ದ್ಯಾಮವ್ವ(66) ಮೃತಪಟ್ಟವರು. ಭಾನುವಾರ ಸಂಜೆ ಮನೆಯ ಮೇಲೆ ನಿಂತಿದ್ದ ನೀರು ತೆರವುಗೊಳಿಸುವಾಗ ಪಕ್ಕದಲ್ಲಿ ಇದ್ದ ಸರ್ವಿಸ್ ವೈರ್ ನಿಂದ ವಿದ್ಯುತ್ ಪ್ರವಹಿಸಿ ಇಬ್ಬರೂ ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆಗಾಗಲೇ ತೀವ್ರ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬಯಲಾಟ ಕಲಾವಿದರಾದ ಪಂಪಾಪತಿ ನಾಡಿನ ಹಲವೆಡೆ ಎರಡು ಸಾವಿರಕ್ಕೂ ಅಧಿಕ ಬಯಲಾಟ ಪ್ರದರ್ಶನ ನೀಡಿದ್ದು 2015 ರಲ್ಲಿ ಜಾನಪದ ಅಕಾಡೆಮಿ ಪ್ರಶಸ್ತಿ, 2018 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಬಳ್ಳಾರಿಯ ಕೌಲ್ ಬಜಾರ್ ರುದ್ರಭೂಮಿಯಲ್ಲಿ ಸೋಮವಾರ ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...