alex Certify 24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

24 ಪ್ರಕರಣಗಳಲ್ಲಿ ಬೇಕಾಗಿದ್ದ, ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಮಂಗಳೂರು: ಕಳವು ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜನಾಡಿ ಗ್ರಾಮದ ಕಲ್ಲಟ್ಕ ನಿವಾಸಿ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ, ಉಳ್ಳಾಲ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ 24 ಪ್ರಕರಣ ದಾಖಲಾಗಿವೆ. ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿ ತಲೆಮರೆಸಿಕೊಂಡಿದ್ದ.

ಆತನ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದ್ದು, ಕೊಣಾಜೆ ಪೊಲೀಸ್ ಠಾಣೆ ಪ್ರಕರಣದಲ್ಲಿ ಒಂದು ವರ್ಷದಿಂದ ಕೋರ್ಟ್ ಹಾಜರಾಗದೆ ತಲೆಮರೆಸಿಕೊಂಡಿದ್ದ. ಅ. 13ರಂದು ಕೊಣಾಜೆ ಪೊಲೀಸ್ ನಿರೀಕ್ಷಕ ಬಿ. ರಾಜೇಂದ್ರ, ಉಪನಿರೀಕ್ಷಕ ಎಸ್. ನಾಗರಾಜ, ಸಿಬ್ಬಂದಿ ಮೊಹಮ್ಮದ್ ಶರೀಫ್, ಸಂತೋಷ್ ಕೇರಳದ ಮಂಜೇಶ್ವರ ಬಳಿ ಆರೋಪಿಯನ್ನು ದಸ್ತಗಿರಿ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...