ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಶ್ರೀರಾಮಪುರ ನಿವಾಸಿ ಶರತ್ ಕುಮಾರ್ ಶಿಕ್ಷೆಗೆ ಒಳಗಾದ ಅಪರಾಧಿ. ವಿಪರೀತ ಮಧ್ಯ ಸೇವಿಸುತ್ತಿದ್ದ ಶರತ್ ಕುಮಾರ್ ಕುಡಿಯಲು ಹಣ ಕೊಡುವಂತೆ ತಾಯಿ ಕಾತ್ಯಾಯಿನಿ ಅವರ ಬಳಿ ಬಲವಂತ ಮಾಡುತ್ತಿದ್ದ. ಮದುವೆ ಮಾಡುವಂತೆ ತಾಯಿಗೆ ಪೀಡಿಸುತ್ತಿದ್ದ. ಹಣಕ್ಕಾಗಿ ಮನೆ ಮಾರಾಟ ಮಾಡುವಂತೆ ಒತ್ತಾಯಿಸುತ್ತಿದ್ದ.

ಮನೆ ಮಾರಾಟ ಮಾಡಲು ತಾಯಿ ಒಪ್ಪಿರಲಿಲ್ಲ. ಇದರಿಂದ ಆಕ್ರೋಶಗೊಂಡ ಶರತ್ ಕುಮಾರ್ 2018ರ ಜೂನ್ 13ರಂದು ಉಸಿರುಗಟ್ಟಿಸಿ ಕಾತ್ಯಾಯಿನಿ ಅವರನ್ನು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶರತ್ ಕುಮಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read