alex Certify ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ತಜ್ಞರಿಂದ ಮಹತ್ವದ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ತಜ್ಞರಿಂದ ಮಹತ್ವದ ಸೂಚನೆ

ಸಾಲು ಸಾಲು ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಮೂರನೇ ಅಲೆಯ ಅಪಾಯಗಳ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆಗಸ್ಟ್​ 27ರಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಕರೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಈ ತಜ್ಞರು ಮುಂಬರುವ ಹಬ್ಬಗಳನ್ನು ಸೀಮಿತ ಸಂಖ್ಯೆಯ ಜನಮಿತಿಯ ಜೊತೆ ಆಚರಿಸಬೇಕೆಂದು ಸೂಚನೆ ನೀಡಿದ್ದರು.

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪರಾಜ್ಯಪಾಲ ಅನಿಲ್​ ಬೈಜಲ್​, ನೀತಿ ಆಯೋಗದ ಸದಸ್ಯ ವಿ.ಕೆ. ಪಾಲ್​ ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ವಿ.ಕೆ. ಪಾಲ್​ ಈವರೆಗೆ ಕೊರೊನಾದಲ್ಲಿ ಸಾಧಿಸಿದ ಯಶಸ್ಸನ್ನು ನಾವು ಹಬ್ಬಗಳ ಸರಣಿಯಲ್ಲಿ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಪಾಲ್​ ನೀಡಿರುವ ಮಾಹಿತಿಯ ಪ್ರಕಾರ ಅಕ್ಟೋಬರ್​ ಹಾಗೂ ನವೆಂಬರ್​ ತಿಂಗಳಲ್ಲಿ ಕೊರೊನಾ ಮೂರನೇ ಅಲೆ ದೇಶಕ್ಕೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ.

ಸರಣಿ ಹಬ್ಬಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಮೂರನೇ ಅಲೆಯು ಅಕ್ಟೋಬರ್​ – ನವೆಂಬರ್ ತಿಂಗಳಲ್ಲಿ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಜನತೆ ಹಬ್ಬಗಳನ್ನು ಆದಷ್ಟು ಸರಳವಾಗಿ ಆಚರಿಸುವಂತೆ ನೋಡಿಕೊಳ್ಳಲೇಬೇಕಿದೆ ಎಂದು ಪಾಲ್​ ಸೂಚನೆ ನೀಡಿದ್ದಾರೆ.

ಈ ಅವಧಿಯಲ್ಲಿ ಸರ್ಕಾರ ಸೋಂಕು ಪತ್ತೆ ಹಚ್ಚುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸಬೇಕಿದೆ. ಸಾಮಾನ್ಯ ಜ್ವರ ಹಾಗೂ ಕೋವಿಡ್​ 19 ಭಾಗಶಃ ಒಂದೇ ರೀತಿಯ ಲಕ್ಷಣಗಳನ್ನು ಹೊಂದಿರೋದ್ರಿಂದ ಸಮೀಕ್ಷೆ ಸೂಕ್ತ ರೀತಿಯಲ್ಲಿ ನಡೆಯಬೇಕು ಎಂದು ಪಾಲ್​ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಪಾಲ್​ರ ಸಲಹೆಯನ್ನು ಬೆಂಬಲಿಸಿದ ಏಮ್ಸ್​ ನಿರ್ದೇಶಕ ರಂದೀಪ್​ ಗುಲೇರಿಯಾ, ಕೋವಿಡ್​ ಪರೀಕ್ಷೆಗಳನ್ನು ಇನ್ನಷ್ಟು ಚುರುಕುಗೊಳಿಸಿದಲ್ಲಿ ಮಾತ್ರ ಸೋಂಕು ಪತ್ತೆ ಹಚ್ಚುವಿಕೆ ವೇಗ ಪಡೆದುಕೊಳ್ಳುತ್ತದೆ. ಈ ಸಂದರ್ಭದಲ್ಲಿ ಕೋವಿಡ್​, ಡೆಂಗ್ಯೂ ಪ್ರಕರಣಗಳ ಜೊತೆಯಲ್ಲಿ ವೈರಲ್​ ಜ್ವರ ಹೊಂದಿರುವ ರೋಗಿಗಳ ಸಂಖ್ಯೆ ಕೂಡ ಹೆಚ್ಚಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...