alex Certify ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, ಕೆಲವೇ ಹೊತ್ತಿನಲ್ಲಿ ಮೃತ ಕಾರ್ಮಿಕರ ಮೃತದೇಹಗಳನ್ನು ಶಿಫ್ಟ್ ಮಾಡಲಾಗುವುದು.

ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು, ಕೋಟ್ಯಂತರ ರೂ. ಮೌಲ್ಯದ ಪಟಾಕಿ ಸುಟ್ಟು ಭಸ್ಮವಾಗಿವೆ. ಒಂದು ಕ್ಯಾಂಟರ್, ಎರಡು ಬೋಲೇರೋ, ನಾಲ್ಕು ಬೈಕ್ ಸುಟ್ಟು ಹೋಗಿವೆ. ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದ್ದಾರೆ. ಅಗ್ನಿ ಅವಘಡದಲ್ಲಿ ಮೃತ ದೇಹಗಳು ಸುಟ್ಟು ಕರಕಲಾಗಿವೆ. ಅವಶೇಷಗಳ ಅಡಿ ಸಿಲುಕಿದ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ನಡೆಸಲಾಗಿದೆ.

ಪಟಾಕಿ ಶಾಪ್ ನಲ್ಲಿ 20 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪಟಾಕಿ ತಂದು ಅನ್ ಲೋಡ್ ಮಾಡುವ ವೇಳೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...