alex Certify ಕೊರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತ: ಶಿವಮೊಗ್ಗ ಮಹಾನಗರ ಪಾಲಿಕೆ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾದಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಉಚಿತ: ಶಿವಮೊಗ್ಗ ಮಹಾನಗರ ಪಾಲಿಕೆ ಮಹತ್ವದ ಕ್ರಮ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಉಚಿತವಾಗಿ ನೆರವೇರಿಸಲು ಮುಂದಾಗಿದೆ.

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ, ಜಿಲ್ಲೆಯಲ್ಲಿ ಪ್ರಸ್ತುತ ಕೊರೋನಾ ಸೋಂಕಿನಿಂದ ಬಹಳಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ. ಅಂತಹ ಮೃತದೇಹಗಳನ್ನು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 14 ರ ರಾಜೀವ್ ಗಾಂಧಿ ಬಡಾವಣೆ ಸಮೀಪದಲ್ಲಿರುವ ಪಾಲಿಕೆ ವತಿಯಿಂದ ನಿರ್ವಹಿಸುತ್ತಿರುವ ಅನಿಲ ಚಿತಾಗಾರದಲ್ಲಿ ಶವ ದಹನ ಕ್ರಿಯೆ ನಡೆಸಲಾಗುತ್ತದೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ಆರ್ಥಿಕ ಹೊರೆ ತಪ್ಪಿಸುವ ದೃಷ್ಟಿಯಿಂದ ಈ ಅನಿಲ ಚಿತಾಗಾರದಲ್ಲಿ ಶವಗಳ ದಹನ ಕ್ರಿಯೆಯ ಶುಲ್ಕ ಪಾವತಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಇಂದಿನಿಂದ ಜುಲೈ 31 ರವರೆಗೆ ವಿನಾಯಿತಿ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...