alex Certify Watch Video | ವೇದ ಪಂಡಿತರಿಗೆ ಕ್ರಿಕೆಟ್ ಟೂರ್ನಮೆಂಟ್; ಸಂಸ್ಕೃತದಲ್ಲಿ ವೀಕ್ಷಕ ವಿವರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch Video | ವೇದ ಪಂಡಿತರಿಗೆ ಕ್ರಿಕೆಟ್ ಟೂರ್ನಮೆಂಟ್; ಸಂಸ್ಕೃತದಲ್ಲಿ ವೀಕ್ಷಕ ವಿವರಣೆ

ಮಧ್ಯ ಪ್ರದೇಶದ ಭೋಪಾಲ್ ನಲ್ಲಿ ವೇದ ಪಂಡಿತರ ಕ್ರಿಕೆಟ್ ಟೂರ್ನಮೆಂಟ್ ನಡೆಯುತ್ತಿದ್ದು, ವಿಶೇಷ ಸಂಗತಿ ಎಂದರೆ ಇಲ್ಲಿ ಆಟಗಾರರು ಪರಸ್ಪರ ಸಂಸ್ಕೃತದಲ್ಲಿ ಸಂಭಾಷಣೆ ನಡೆಸುತ್ತಾರೆ. ಅಷ್ಟೇ ಅಲ್ಲ ವೀಕ್ಷಕ ವಿವರಣೆಯನ್ನು ಸಹ ಸಂಸ್ಕೃತದಲ್ಲಿ ನೀಡಲಾಗುತ್ತಿದೆ.

ಮಹರ್ಷಿ ಮಹೇಶ್ ಯೋಗಿಯವರ ಜನ್ಮದಿನದ ನಿಮಿತ್ತ ಈ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದ್ದು, ಆಟಗಾರರು ಸಾಂಪ್ರದಾಯಿಕ ಧೋತಿ ಮತ್ತು ಕುರ್ತಾ ಧರಿಸಿ ಟೂರ್ನಿಯಲ್ಲಿ ಪಾಲ್ಗೊಂಡಿದ್ದಾರೆ. ಇದರಲ್ಲಿ ಪಾಲ್ಗೊಂಡಿರುವ ಅಂಪೈರ್ ಸಹ ತೀರ್ಪನ್ನು ಸಂಸ್ಕೃತದಲ್ಲಿ ನೀಡುತ್ತಿದ್ದಾರೆ.

ಭೋಪಾಲ್ ನ ಅಂಕುರ್ ಮೈದಾನದಲ್ಲಿ ಈ ಟೂರ್ನಮೆಂಟ್ ನಡೆಯುತ್ತಿದ್ದು, ಪಂದ್ಯ ಆರಂಭಕ್ಕೂ ಮುನ್ನ ವೇದಗಳ ಅನುಸಾರ ಕ್ರೀಡಾಪಟುಗಳು ವಿಧಿ ವಿಧಾನಗಳನ್ನು ಅನುಸರಿಸಿದ್ದಾರೆ. ಮಹತ್ವದ ಸಂಗತಿ ಎಂದರೆ ಮಹರ್ಷಿ ಕಪ್ ಮೂರನೇ ವರ್ಷದಲ್ಲಿ ನಡೆಯುತ್ತಿದೆ.

ಸಂಸ್ಕೃತವನ್ನು ಮತ್ತಷ್ಟು ಉತ್ತೇಜಿಸಲು ಹಾಗೂ ವೇದ ಪಂಡಿತರ ಕುಟುಂಬಕ್ಕೆ ಕ್ರೀಡಾ ಉತ್ಸಾಹ ತುಂಬಲು ಈ ಟೂರ್ನಿಯನ್ನು ಆಯೋಜಿಸಲಾಗಿದ್ದು, ವಿಜೇತ ತಂಡಕ್ಕೆ ನಗದು ಬಹುಮಾನದ ಜೊತೆಗೆ ವೇದ ಪುಸ್ತಕಗಳು ಹಾಗೂ ಪಂಚಾಂಗವನ್ನು ನೀಡಲಾಗುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Proč semena Jak vařit těstoviny, aby Nejen vejce: potraviny, Může se srdce zastavit bez varování? Odpověď kardiologa 22. února – jaký církevní svátek slavíme a Jak barva vašeho jazyka odráží vaše zdraví: Proč se nazývá Jak přežít bez Jak si zapamatovat příbuzné: první sobota rodičů v roce 8 důvodů, proč kočka mňouká: Nejčastější příčiny kočičích koncertů 7 způsobů, jak přeměnit staré tričko Recept na červený zelí salát s okurkou, mrkví a hráškem