alex Certify BIG BREAKING: ಸಿಎಂ ಸ್ಥಾನದಿಂದ BSY ಬದಲಾವಣೆ ಕನ್ಫರ್ಮ್: ಸಿ.ಟಿ. ರವಿ ಸುಳಿವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂ ಸ್ಥಾನದಿಂದ BSY ಬದಲಾವಣೆ ಕನ್ಫರ್ಮ್: ಸಿ.ಟಿ. ರವಿ ಸುಳಿವು

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರು ಬದಲಾಗುವುದು ಖಚಿತವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಈ ಕುರಿತಂತೆ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನಪ್ರಿಯ ನಾಯಕರಾಗಿದ್ದು, ಪಕ್ಷ ಅವರಿಗೆ ಬಹಳಷ್ಟು ಅವಕಾಶಗಳನ್ನು ನೀಡಿದೆ. ನಾಲ್ಕು ಬಾರಿ ಮುಖ್ಯಮಂತ್ರಿ, ಒಮ್ಮೆ ಉಪಮುಖ್ಯಮಂತ್ರಿಯಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಅವರಿಗೆ ಎಲ್ಲ ಅವಕಾಶ ನೀಡಿದೆ ಎಂದು ಹೇಳಿದ್ದಾರೆ.

ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಜನ ಸೇವೆ ಮಾಡುವ ಅವಕಾಶ ಯಡಿಯೂರಪ್ಪನವರಿಗೆ ಸಿಕ್ಕಿದೆ. ವಿರೋಧ ಪಕ್ಷದ ನಾಯಕರಾಗಿ, 4 ಸಲ ಪಕ್ಷದ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷದಲ್ಲಿ ಇಷ್ಟೊಂದು ಅವಕಾಶ ಯಾರಿಗೂ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಹೀಗೆ ಹೇಳುವ ಮೂಲಕ ಸಿ.ಟಿ. ರವಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ ಎಂದು ಪರೋಕ್ಷವಾಗಿ ಸುಳಿವು ನೀಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...