alex Certify ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ: ಸಿ.ಟಿ. ರವಿ

ತುಮಕೂರು: ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರಲಿದೆ. ಫಲಿತಾಂಶದ ಬಳಿಕ ಹೋಲ್ ಸೇಲ್ ಆಗಿ ಸರ್ಕಾರವನ್ನೇ ಬದಲಾಯಿಸೋಣ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಹೇಳಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಯಾರೋ ಒಬ್ಬರು ಬಂದು ಮನವಿ ಸಲ್ಲಿಸಿದರು. ಅವರು ಸಂಬಳ ಹೆಚ್ಚಿಸಲು ಅಥವಾ ಅನುದಾನಕ್ಕೆ ಮನವಿ ಸಲ್ಲಿಸಿರಬಹುದು ಎಂದು ಕೊಂಡೆವು. ಆದರೆ, ಅವರು ಏನಾದರೂ ಮಾಡಿ ಶಿಕ್ಷಣ ಸಚಿವರನ್ನು ಬದಲಾಯಿಸಿ ಎಂದು ಮನವಿ ಮಾಡಿದ್ದರು ಎಂದು ಹೇಳಿದ್ದಾರೆ.

ರಿಟೇಲ್ ಸಚಿವರನ್ನು ಬದಲಾಯಿಸುವ ಬದಲು ಹೋಲ್ ಸೇಲ್ ಆಗಿ ಎಲ್ಲರನ್ನೂ ಬದಲಾಯಿಸಿ ಬಿಡೋಣ. ಶಿಕ್ಷಣ ಸಚಿವರನ್ನು ಮಾತ್ರ ಬದಲಿಸದೇ ಎಂಟೈರ್ ಸರ್ಕಾರವನ್ನೇ ಬದಲಿಸೋಣ. ಹೇಗೂ ಜೂನ್ 4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಬರುತ್ತದೆ. ಫಲಿತಾಂಶದ ಬಳಿಕ ಇಡೀ ಸರ್ಕಾರವನ್ನೇ ಬದಲಾಯಿಸಿ ಬಿಡೋಣ ಎಂದು ಸಿ.ಟಿ. ರವಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...