alex Certify BIG NEWS: ಸಿಲಿಂಡರ್ ಸ್ಫೋಟ: ಗಾಯಾಳು ಯುವಕ ಚಿಕಿತ್ಸೆ ಫಲಿಸದೇ ಸಾವು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಲಿಂಡರ್ ಸ್ಫೋಟ: ಗಾಯಾಳು ಯುವಕ ಚಿಕಿತ್ಸೆ ಫಲಿಸದೇ ಸಾವು!

ಹುಬ್ಬಳ್ಳಿ: ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ ಹೌಸ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

26 ವರ್ಷದ ಸುಭಾಷ್ ಮೋಹನ್ ರಾಮ್ ಮೃತ ದುರ್ದೈವಿ. ರಾಜಸ್ಥಾನದ ಜೋಧ್ ಪುರ ಮೂಲದವರು. ಅಡುಗೆ ಅನಿಲ ಸೋರಿಕೆಯಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಸುಭಾಷ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ನಗರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುಭಾಷ್ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರು ತಮ್ಮ ಊರಿಗೆ ವಾಪಾಸ್ ಆಗಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...