alex Certify BREAKING : ಚುನಾವಣಾ ಅಖಾಡಕ್ಕೆ ‘ದಳಪತಿ ವಿಜಯ್’ ಎಂಟ್ರಿ ; ಇಂದು ‘ಟಿವಿಕೆ’ ಪಕ್ಷದ ನೂತನ ಧ್ವಜ ಬಿಡುಗಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚುನಾವಣಾ ಅಖಾಡಕ್ಕೆ ‘ದಳಪತಿ ವಿಜಯ್’ ಎಂಟ್ರಿ ; ಇಂದು ‘ಟಿವಿಕೆ’ ಪಕ್ಷದ ನೂತನ ಧ್ವಜ ಬಿಡುಗಡೆ.!

ಚೆನ್ನೈ : ನಟ ದಳಪತಿ ವಿಜಯ್ ರಾಜಕೀಯಕ್ಕೆ ಕಾಲಿಟ್ಟಿರುವ ವಿಚಾರ ನಿಮಗೆ ಗೊತ್ತೇ ಇದೆ.‘ತಮಿಳಗ ವೆಟ್ರಿ ಕಳಗಂ’ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಚುನಾವಣಾ ಅಖಾಡಕ್ಕೆ ದಳಪತಿ ವಿಜಯ್ ಎಂಟ್ರಿ ಕೊಡುತ್ತಿದ್ದು, ಇಂದು ಟಿವಿಕೆ ಪಕ್ಷದ ನೂತನ ಧ್ವಜ ಬಿಡುಗಡೆ ಮಾಡಲಿದ್ದಾರೆ. 2026 ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಖಾ ಅಖಾಡಕ್ಕೆ ಎಂಟ್ರಿ ಕೊಡಲು ದಳಪತಿ ವಿಜಯ್ ಈಗಿನಿಂದಲೇ ಸಿದ್ದತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ . ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ರಾಜಕೀಯದಲ್ಲಿ ನಟ ವಿಜಯ್ ಯಾವ ರೀತಿ ಛಾಪು ಮೂಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...